ನಮಗೆ ತಿಳಿಯದ ಬದುಕು

ಮರಣವನ್ನು ಯಾರು ನೋಡಿಲ್ಲ ಬಹುಶ...ಅದು ಅಂದವಾಗಿ ಇರಬಹುದು !

ಏಕೆಂದರೆ ಅದನ್ನು ಒಂದು ಸಲ ಭೇಟಿಯಾದವರು.ಮತ್ತೆ ಜೀವಿಸಲು ಮರೆತುಬಿಡುತ್ತಿದ್ದಾರೆ !

ಪ್ರಕೃತಿಯ ನಿಯಮಗಳು ಕೂಡಾ ತುಂಬ ವಿಚಿತ್ರವಾಗಿದೆ -

ಪ್ರಾಣವಿರುವ ಮನುಷ್ಯ ನೀರಿನಲ್ಲಿ ಮುಳುಗಿ ಹೋಗುತ್ತಾನೆ !
ಸತ್ತವನು ನೀರಿನಲ್ಲಿ ತೇಲುತ್ತಾನೆ !

ಜೀವನವೆಲ್ಲ ಹಣದ ಹಿಂದೆ ಓಡುವವನಿಗೆ ಗೊತ್ತಾ ?
ನಾಳೆ ಸತ್ತ ಮೇಲೆ ಅವನು ಬರೀ ಕೈಯಲ್ಲಿ ಹೋಗುತ್ತಾನೆಂದು !

ಸುಂದರವಾದ ಶರೀರವನ್ನು ನೋಡಿ ಆನಂದಿಸುತ್ತೇವೆ ಆದರೆ...ನೀವಾದರು ನಾನಾದರು ಆಗುವುದು ಬೂದಿನೆ...

ಒಬ್ಬರು ಅತ್ತು ಮನಸು ಹಗುರ ಮಾಡಿಕೊಳ್ಳುತ್ತಾರೆ !
ಇನ್ನೊಬ್ಬರು ನಕ್ಕು ದುಃಖವನ್ನು ಮರೆಮಾಡಿಕೊಳ್ಳುತ್ತಾರೆ

ಈ ಮನುಷ್ಯರ ಐಕ್ಯತೆಯನ್ನು ನೋಡಿದರೆ ನನಗೆ ಆಶ್ಚರ್ಯವಾಗುತ್ತದೆ !

ಬದುಕಿರುವವರೆಗು ಒಬ್ಬರನ್ನು ತುಳಿದು ಮೇಲೆ ಬರಬೇಕೆನ್ನುಕೊಳ್ಳುತ್ತಾನೆ...
ಇರುವಷ್ಟು ದಿನ ಕಿತ್ತಾಡಿಕೊಳ್ಳುತ್ತಾರೆ...
ಸತ್ತ ಮೇಲೆ ತನ್ನ ಹೆಗಲ ಮೇಲೆ ಹೊತ್ತುಕೊಂಡು...
ಮಸಣದ ವರೆಗೆ ಹೋಗುತ್ತಾನೆ...

ಇರುವವರೆಗು ಎಲ್ಲರನ್ನು ಪ್ರೀತಿಸೊಣ...
ಒಳ್ಳೆಯ ಮಾತನ್ನೆ ಆಡೊಣ..
ಒಬ್ಬರಿಗೊಬ್ಬರು ಸಹಾಯ ಮಾಡೊಣ....

ಚೇತನ್ ಜಿಕೆ

ಬಿಂದಾಸ್

- Chethan Gowda

11 Apr 2019, 10:16 am
Download App from Playstore: