ನೋವು

ಬದುಕಿದು ಕಗ್ಗತ್ತಲ ನೀರವ ಮೌನ
ಯಾರಿಗೂ ಕಾಣದ ಕತ್ತಲಲ್ಲಿ ಕಣ್ಣೀರದೇ ಧ್ಯಾನ
ನಗುವಾಗಲು ಅನುಭವಕೆ ಬಾರದು ಸಂತಸ
ಅತ್ತಾಗಲು ದೂರಾಗವು ಕಂಡ ನೋವುಗಳು, ವಿಪರ್ಯಾಸ

ಕತ್ತಲಲಿ ಕಣ್ಣ ನೀರು ಜಾರುತಿದೆ ಕೆನ್ನೆಯ ಸವರಿ
ಅದು ಕೂಡ ಉಳಿಸುತಿದೆ ಮತ್ತಷ್ಟು ನೆನಪುಗಳ
ಕೆನ್ನೆಯ ಮೇಲೆ ತಾ ಜಾರಿದ ಕುರುಹ ಉಳಿಸಿ
ತಲೆದಿಂಬಿಗೂ ಭಯವೇನೋ ಸುರಿವ ಮಹಾಪೂರ ಮಳೆಗೆ ಹೆದರಿ

ನಗುವಾಗಲು ಕಾಡುವುದು ಮನಸೆಂಬ ಮಾಯೆ
ಕಣ್ಣಂಚಲಿ ತಂದು ನಿಲ್ಲಿಸುವುದು ನೋವಿನ ಛಾಯೆ
ಬಾಗಿ ನಗುತಿರಲು ತುಟಿಗಳು, ತುಂಬಿ ಬಂದಿವೆ ಕಣ್ಣುಗಳು
ಒರೆಸಲು ಚಾಚಿ ಬಂದರು ಕೈಗಳು,
ಏನೋ ಬಿತ್ತು ಕಣ್ಣಿಗೆ ಎಂದು ನುಡಿದಿವೆ ನಗುವ ತುಟಿಗಳು.

ಮನಸ್ಸಿದು ಅಳುಕಿ ಅಳುತಿದೆ ಕ್ಷಣಕ್ಷಣವೂ
ಮತ್ತೆ ಮತ್ತೆ ಕಾಣುತ್ತಿರುವ ಸೋಲುಗಳ ನೆನೆದು
ಸಾವಿಗೂ ದೂರ ನೋವು ಕಂಡ ಮನಸುಗಳು
ಕಾಣದೆ ದಾರಿ ಮತ್ತೆ ಮತ್ತೆ ಬದುಕುತಿವೆ ನಂಬಿ ನಾಳೆಗಳಲಿ ಕಾಣಬಹುದು ಬಾಳ ಬೆಳಗುವ ಕಿರಣಗಳು.

- ಶ್ರೀಕಾವ್ಯ

21 Jan 2017, 10:31 am
Download App from Playstore: