ಸಂಪತ್ತಿಗೆ ಸ್ವಾಭಿಮಾನಿಯ ಸವಾಲ್!

ಮನಸ್ಸು ಭಾರ ವಾಯ್ತು.
ಹೃದಯಕ್ಕೆ ನೋವಾಯ್ತು.
ಸ್ವಾಭಿಮಾನಕ್ಕೆ ದಕ್ಕೆಯಾಯ್ತು.

ಹೀಯಾಳಿಸುವ ಜನಕ್ಕೆ ಸಾಧಿಸಿ ತೋರಿಸುವ ಛಲವಾಯ್ತು
ಜೀವನವೆಂಬ ರಣರಂಗದಲಿ ಚರಿತ್ರೆ ಸೃಷ್ಠಿಸುವ ಕಾಲ ಬಂದಾಯ್ತು
ಚರಿತ್ರೆಯ ಪುಟ ಪುಟದಲ್ಲೂ ಮಿಂಚುವ ರೋಷ ಉಕ್ಕಾಯ್ತು
ಇದೋ ನಿನ್ನ ಸಂಪತ್ತಿಗೆ ಈ ಸ್ವಾಭಿಮಾನಿಯ ಸವಾಲ್ !

- ವೇಣು ಆರ್ ಚಿನ್ನದೂರು

05 May 2017, 12:20 am
Download App from Playstore: