ಭೂತಾಯಿ
ಹೊರುವಳು ಭೂಮಾತೆ
ನಮ್ಮ ಭಾರವನ್ನು ತನ್ನ ಮಕ್ಕಳೆಂದು
ಸಹಣೆಯಿಂದಲೇ ತಾನು ನೊಂದು........
ಜನನದಿಂದ ಮರಣದ ವರೆಗೂ
ತದನಂತರವೂ ತಾನು ಜನನಿ
ನಮ್ಮ ಭೂತಾಯಿ ವಸುದೆ ಕರುಣಾಮಯಿ.......
ತವರಿನೂರು ಹೆಸರಿಲ್ಲದ ಹಸಿರುವರ್ಣ
ಬಾಳ ಬಂಗಾರ ಇವಳು ತನ್ನಲ್ಲೇ ಬಚ್ಚಿಟ್ಟಳು
ಬೆಳ್ಳಿ ಬಂಗಾರ,ವಜ್ರ ವೈಡೂರ್ಯ........
ರೈತನಿವಳ ಹೆತ್ತ ಮಗನಲ್ಲ ಆದರೂ ತನ್ನ
ಒಡಲ ಸವಿ ಉಣಿಸುವವಳಲ್ಲ............
ಇಂತಹ ಅವಣಿಯ ಆಕ್ರೋಶ ಏತಕ್ಕೆ
ಕಳೆದುಕೊಂಡಳು ಪೃಥ್ವಿ ತನ್ನ ತಾಳ್ಮೆಯನಿಂದು.....
ಭೂಮಿ ತಮ್ಮದೆಂದು ತಾಣದರ
ಒಡೆಯನೆಂದು ಹೆಮ್ಮೆಯಿಂದ ಹೇಳಿಕೊಳ್ಳುವವರು ಹುಚ್ಚು ಜನರು ಬಂದಾಗ ಹೊತ್ತು ತಂದಿದ್ದೇನು
ಹೋಗುವಾಗ ಹೊತ್ತೊಯ್ಯುವುದೇನು.....
ಅವಳ ಕೊರೆದು ಕೊರೆದು ಹಿಂಸೆಯ ಮಾಡುವುದು ಬಿಟ್ಟರೆ ..............
ಮೇಘರಾಯನು ನೋಡುತಿಹನು ಮೇಲಿಂದ
ಭೂಮಿ ಸಂಕಟ ಕಣ್ಣು ಮುಚ್ಚಿ ಕುಂತಿಹನು ಒಂದು ಹನಿಯ ಕಣ್ಣೀರು ಬೀಳದಂತೆ ಈ ಜನರ ಹೊಟ್ಟೆಗೆ..................
ಸಹನೆ ಕಳೆದುಕೊಂಡ ಭುವಿಯು ತೋರುತಿಹಳು ತನ್ನ ಕೋಪವನಿಂದು ಭೂಕಂಪದ ರೂಪದಲ್ಲಿ,
ಭೂಕುಸಿತದ ತಾಪದಲ್ಲಿ .
ಬಿರುಕು ಬಿದ್ದ ಭೂಮಿಯ ಬಿಂಬದಲ್ಲಿ
ನೀರಿಲ್ಲದೆ ಒಣಗಿದ ಮರುಭೂಮಿಯಲ್ಲಿ.......
ಕಟ್ಟಡಗಳ ಮಧ್ಯೆ ಉಳಿದ ಒಂದೆರಡು ಮರಗಳನ್ನು ನೋಡಿ
ಕಳೆದೊದ ಕಾನನದ ಅವಶೇಷಗಳು ನೋಡಿ.......
ಪ್ರಕೃತಿಯ ಉಳಿವಿಗೆ ಉಸಿರು ಮರಗಳು
ಹಚ್ಚ ಹಸಿರು ಹೆಚ್ಚು ಮಾಡಿ ಇನ್ನೊಂದು
ಜೀವಿಯ ಉಸಿರಿಗೆ ಹೆಸರಾಗಿ .............
ವಿಶ್ವ ಪರಿಸರ ದಿನದ ಶುಭಾಶಯಗಳು
ಸ್ನೇಹಿತರೆ..................
- ಚುಕ್ಕಿ
05 Jun 2017, 11:42 am
Download App from Playstore: