ನ್ಯಾಯ....... ಎಲ್ಲಿದೆ?
ಕಟ್ಟೀರುವರು...ಕಪ್ಪು ಬಟ್ಟೆಯ
ನ್ಯಾಯ... ದೇವತೆಯ ಕಣ್ಣಿಗೆ
ಮಾಡುವ ತಪ್ಪು ಕಾಣದಿರಲೆಂದೆ
ಹುಟ್ಟು ಹಾಕಿವರು. ಸುಳ್ಳು ಸಾಕ್ಷಿಗಳ
ತಪ್ಪೇ ಗೆಲ್ಲಲೆಂದು
ಸುಳ್ಳನ್ನೇ ಸತ್ಯವಾಗಿಸಲು ಮಾನವೀಯತೆಯನ್ನೇ.
...... ಬಲಿ ಕೊಡುತಿಹರು
ಕೆಟ್ಟ ಪುಂಡಾಟಿಕೆಯ ಜನರೇ ಗೆಲ್ಲುತಿಹರು
ಈ.... ಸಮಾಜದಲ್ಲಿ
ಸಾಮಾನ್ಯ ಪ್ರಜೆಯ ನೊಂದ ಕೂಗು
ಕೇಳಲು
ಯಾವ ವಿಷ್ಣು. ಶಿವರು ಅವತಾರವೆತ್ತಲಿಲ್ಲ
ಈ ಕಲಿಯುಗದಲ್ಲಿ
ನ್ಯಾಯ........... ಎಲ್ಲಿದೆ?
ಮಂಜು
- ಮಂಜು
03 Sep 2017, 10:05 am
Download App from Playstore: