ಬರಗಾಲ

ಭೀಕರ ಬರಗಾಲ ಬಡವರ ಜೀವದ
ಸವಿಯ ನೋಡಲೆಂದು ಮಳೆಹನಿಯು ಮೊಡದಲ್ಲಿ ಹಿಡಿದಿಟ್ಟು ಬಂದಿದೆ ಬರಡು ಭೂಮಿಗೆ ಇರುವ ನೀರು ನುಂಗಿ ಬಿರುಕು ಹೊಡೆಯಲೆಂದು..................

ತನ್ನೊಡಲ ದಣಿವು ತೀರಿಸಿಕೊಳ್ಳಲು ರೈತರ ಕಂಬನಿಯ ಕುಡಿದು ಅಟ್ಟಹಾಸದಿ ಅಟ್ಟಕ್ಕೇರಿದೆ ನಾನಿಂದು ನಿಮ್ಮ ಅಪೇಕ್ಷೆಗಳನ್ನು ನಿರಾಸೆಗೊಳಿಸಿದೆ ಎಂದು................

ತಂಗಾಳಿಗೆ ಹೊಯ್ಯ್ಯ್ಯ್ಯ್ ಎಂದು ನಿಂತು ಕುಣಿದಾಡುವ ಬೆಳೆದು ನಿಂತ ಬೆಳೆಗಳು ಹೊಲದಲ್ಲಿ ನೀರಿಲ್ಲದೆ ಸತ್ತು ಬಿದ್ದಿವೆ............

ಬೆನ್ನು ಮೂಳೆಗೆ ಅಂಟಿಕೊಂಡಿದೆ ಬಡ ರೈತನ ಹೊಟ್ಟೆಯಿಂದು ಮಕ್ಕಳ ಬಾಡಿಹೋದ ನಗು ಮುಖಗಳು ಹೂವಿನ ಹಾಗೆ ಅರಳಲೆಂದು ಬೇಡಿದೆವು ಸರ್ಕಾರವ ಒಂದೊತ್ತು ಊಟವಿಡಲೆಂದು...............

ನಮ್ಮ ಕರುಳ ಕೂಗು ಅಧಿಕಿರಿಗಳ ಕಿವಿ ಸೇರುವಷ್ಟರಲ್ಲಿ ನಮ್ಮಲ್ಲಿ ಉಳಿದ ರಕ್ತ ಮಾಂಸಗಳು ಕಿತ್ತು ತಿಂದರೂ ಲಂಚದ ರೂಪದಲ್ಲಿ ನ್ಯಾಯ ಕೇಳಲು ನಾವಾಕಿದ ಪ್ರತಿ ಹೆಜ್ಜೆಗೂ..................

ನಮ್ಮಣ್ಣರಸಿ ಬಂದ ಬರಗಾಲಕ್ಕಿರುವ ಕರುಣೆಯು ಇವರಿಗಿಲ್ಲ ನಮ್ಮ ನೋವು ಅರಿತು ನ್ಯಾಯ ನೀಡುವ ಮಾನವತ್ವ ಇವರಲ್ಲಿಲ್ಲ ಉಳಿದಿಲ್ಲ.................

- ಚುಕ್ಕಿ

06 Sep 2017, 09:53 pm
Download App from Playstore: