ಲೇಖನಿ
ನೀನೆನೆ ಜ್ಞಾನದ ಊರಿನ ಹೆಬ್ಬಾಗಿಲಲಿಟ್ಟ ಕದ
ನಿನ್ನರಿಯದೆ ತಲುಪಲಾಗದು ಆ ಊರ ಸೀದಾ
ನಿನಗಿಲ್ಲ ಬಡವ ಬಲ್ಲಿದನೆಂಬ ಯಾವ ಭೇದ
ನಿನ್ನಿಡಿದವರ್ಯಾರಾದರು ನೀ ತೋರುವುದಿಲ್ಲ ಮದ
ಅದಕೆ ಮನೆ ಮನಗಳಲ್ಲಿ ನೀ ಪೂಜನೀಯ ಸದಾ
ನೀನಲ್ಲ ಕೇವಲ ಮಸಿ ತುಂಬಿದ ಲೇಖನಿ
ನಿನ್ನೊಳಗುಂಟು ಶಕ್ತಿಯು ಒರೆಸಲು ಕಂಬನಿ
ನೀನಿದ್ದರೆ ಅಲ್ಲುಂಟು ಹತ್ತು ಹಲವು ಕಹಾನಿ
ಕೆಲವೊಂದು ನಗು ಪ್ರೀತಿಯ ತುಂತುರು ಹನಿ
ಮತ್ತಷ್ಟು ನೋವು ಕಣ್ಣೀರಿನಿಂದಾದ ಗಣಿ
ನೀನು ಆ ಖಡ್ಗಕ್ಕಿಂತ ಹರಿತ
ಕಂಡಾಗ ಜನಸಾಮಾನ್ಯರ ಮೇಲೆ ತುಳಿತ
ಬರೆಯುವೆ ಬಯಸಿ ಆ ಜನರಿಗೆ ಒಳಿತ
ಏರುಪೇರಾಗಿಸಿರುವೆ ತುಳಿವವರ ಎದೆಯ ಬಡಿತ
ಸೋತವರ ಪಾಲಿಗೆ ತೋರಿ ಪ್ರೇಮದ ಮಿಡಿತ
ನಿನ್ನ ಹಿಡಿದವನ ಮನಸಾದರೆ ದುಷ್ಟ
ಅದು ಈ ಸಮಾಜಕ್ಕೇನೆ ದುರಾದೃಷ್ಟ
ಅವನು ಹೇಳಿದಂತೆಯೆ ನೀ ಬರೆಯುವುದು ಸ್ಪಷ್ಟ
ಅದರಿಂದಾಗುವ ಒಳಿತು ಕೆಡುಕುಗಳಂತು ಅಸ್ಪಷ್ಟ
ಹಾಗೆ ಸಿಕ್ಕಿದನ್ನೆಲ್ಲ ಬರೆಯುವಾಗ ನಿನಗೆಷ್ಟಾಗಿರಬೇಕು ಕಷ್ಟ
- ಶ್ರೀಕಾವ್ಯ
19 Oct 2017, 05:59 pm
Download App from Playstore: