ಆದರ್ಶದ ಕಟ್ಟೆ
ಹೌದು
ನೀನು ಇದ್ದಿದ್ದೇ ಆಗಿದ್ದರೆ
ನಾನು ಹೀಗಾಗುತ್ತಿರಲಿಲ್ಲ
ನಿನ್ನ ಇರುವಿಕೆ ಅನುಮಾನಗೊಂಡದ್ದು
ನಾನು ನನ್ನಂತೆ ಜೀವಿಸಲಾರದ್ದಕ್ಕೆ
ಬಾಳು ಶುಷ್ಕವೆನಿಸಿ
ಸಾವಿನ ಮನೆ
ಕದ ಮುರಿಯಲೆತ್ನಿಸಿದ್ದು
ನಿನ್ನಲ್ಲಿಯ ನಂಬುಗೆ
ಮರಗಟ್ಟಿದಕ್ಕೆ
ಕಳ್ಳ ಸುಳ್ಳರ ಮನೆ
ಕದ ಕಾಯುವ ನೀನು
ದೀನರೆಡೆ ಕಿಂಚಿತ್
ಕರುಣೆ ಹರಿಸಬೇಕಿತ್ತು
ಇದಕ್ಕೆಲ್ಲ ನಿನ್ನ ಸಮಜಾಯಿಷಿ
ಕರ್ಮ ಸಿದ್ದಾಂತ
ಒಪ್ಪುವುದಿಲ್ಲ ಬಿಡು
ಹಸಿದು ಕಂಗೆಟ್ಟಾಗ
ಮೀರಲೇ ಬೇಕಾಗುತ್ತದೆ
ಆದರ್ಶದ ಕಟ್ಟೆ
- ಯು.ರಾಮು ಸಿರಿಗೆರೆ
02 Dec 2017, 08:40 pm
Download App from Playstore: